ಒಕ್ಕೂಟದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಸೂಚನೆಯಂತೆ ಬಂಟರ ಯಾನೆ ನಾಡವರ ಜಾತಿಯನ್ನು ಒಂದೇ ಎಂದು ಪರಿಗಣಿಸಿ ಹಿಂದುಳಿದ ವರ್ಗ ‘2 ಎ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ದೊರಕಿಸುವಂತೆ ಕೋರಿಕೆಯನ್ನು ಒಕ್ಕೂಟದ ಕಾರ್ಯದರ್ಶಿ ಶ್ರೀ ಜಯಕರ್ ಶೆಟ್ಟಿ ಇಂದ್ರಾಳಿಯವರು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಇದರ ಅಧ್ಯಕ್ಷರಾದ ಸನ್ಮಾನ್ಯ ಕೆ. ಜಯಪ್ರಕಾಶ್ ಹೆಗ್ಡೆಯವರನ್ನು ಅವರ ಬೆಂಗಳೂರಿನ ಗ್ರಹಕಚೇರಿಯಲ್ಲಿ ಭೇಟಿಮಾಡಿ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಪತ್ರ ನೀಡಿದರು. ಇದಕ್ಕೆ ಸ್ಪಂದಿಸಿದ ಶ್ರೀ ಜಯಪ್ರಕಾಶ್ ಹೆಗ್ಡೆಯವರು ಸಂಪೂರ್ಣ ಬೆಂಬಲ ಸೂಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ತುಂಬು ಹೃದಯದಿಂದ ಭರವಸೆ ನೀಡಿದ್ದು ಇವರಿಗೆ,ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು,ನಿರ್ದೇಶಕರು,ಮಹಾಪೋಷಕರು, ಪೋಷಕರು ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರ ಧನ್ಯವಾದಗಳು ತಿಳಿಸಿರುತ್ತಾರೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ