ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ನಗರದಲ್ಲಿ ಅರೋಗ್ಯ ಇಲಾಖೆಯ ಎಲ್ಇಡಿ ಪರದೆ ಹೊಂದಿರುವ ವಾಹನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಚಾಲನೆ ನೀಡಿದರು. ಈ ವಾಹನವು ಹಳ್ಳಿ ಹಳ್ಳಿಗಳಿಗೆ ತೆರಳಿ ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ಕಿರುಚಿತ್ರದ ಮೂಲಕ ಭಿತ್ತರಿಸಿ ಜನರಿಗೆ ಮಾಹಿತಿ ನೀಡುತ್ತದೆ.

ಈ ಸಂದರ್ಭದಲ್ಲಿ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಸೂಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ಡಿ.ಹೆಚ್.ಒ. ಡಾ. ರಾಜೇಶ್ ಸುರಗಿಹಳ್ಳಿ, ಬಿಜೆಪಿ ಪ್ರಮುಖರಾದ ಸುರೇಖಾ ಮುರಳೀಧರ್, ಎನ್.ಜೆ. ರಾಜಶೇಖರ್, ವಿಶ್ವನಾಥ್, ಶಶಿಧರ್ ಮೊದಲಾದವರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…