ಶಿವಮೊಗ್ಗ ನ್ಯೂಸ್…

ಆಲ್ಕೋಳ ವಿದ್ಯುತ್ ಉಪಕೇಂದ್ರದ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ವೆಂಕಟೇಶನಗರ, ಅಚ್ಯುತ್‍ರಾವ್ ಲೇಔಟ್, ಚೆನ್ನಪ್ಪ ಲೇಔಟ್, ಜಯನಗರ, ಎ.ಎನ್.ಕೆ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 23/10/2021 ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ಕಾ ಮತ್ತು ಪಾ ನಗರ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಮಂಡ್ಲಿ ವಿವಿ ಕೇಂದ್ರಕ್ಕೆ ಸಂಪರ್ಕ ಹೊಂದಿರುವ ದುರ್ಗಿಗುಡಿ 11 ಕೆವಿ ಮಾರ್ಗವನ್ನು ಭೂಗತ ಕೇಬಲ್ ಆಗಿ ಪರಿವರ್ತಿಸುವ ನಿಟ್ಟಿನಲ್ಲಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಹಮ್ಮಿಕೊಂಡಿದ್ದು, ಗಾರ್ಡ್‍ನ್ ಏರಿಯಾ 1 ರಿಂದ 3 ಅಡ್ಡರಸ್ತೆಗಳು, ಸವಾರ್‍ಲೇನ್ ರಸ್ತೆ, ಎಲ್ ಎಲ್ ಆರ್ ರಸ್ತೆ, ಗೋಪಿವೃತ್ತ, ಜೆಪಿಎನ್ ರಸ್ತೆ ಹಾಗೂ ದುರ್ಗಿಗುಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 23/10/2021 ರಂದು ಬೆಳಗ್ಗೆ 9:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಮೆಸ್ಕಾಂನ ನಗರ ಉಪವಿಭಾಗ-2 ರ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…