ಶಿವಮೊಗ್ಗ ನ್ಯೂಸ್…

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಇಂರ‍್ಯಾಕ್ಟ್ ಕ್ಲಬ್ ಸಹಕಾರಿ ಎಂದು ರೋಟರಿ ವಲಯ 11ರ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು.

ಶಿವಮೊಗ್ಗ ನಗರದ ಹೊಸಮನೆಯ ಶ್ರೀ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಶ್ರೀ ವಿದ್ಯಾಲಯ ಇಂರ‍್ಯಾಕ್ಟ್ ಕ್ಲಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾಭ್ಯಾಸದ ಜತೆಯಲ್ಲಿ ಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಸಮಾಜಮುಖಿಯಾಗಿ ತೊಡಗಿಸಿಕೊಳ್ಳುವುದನ್ನು ಇಂರ‍್ಯಾಕ್ಟ್ ಕ್ಲಬ್ ಕಲಿಸುತ್ತದೆ. ವಿದ್ಯಾರ್ಥಿಗಳ ಉನ್ನತಿಗೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಮಕ್ಕಳಿಗೆ ಉಪಯುಕ್ತ ಆಗುವ ರೀತಿಯಲ್ಲಿ ರೋಟರಿ ಸಂಸ್ಥೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ವಿದ್ಯಾರ್ಥಿಗಳು ಇಂರ‍್ಯಾಕ್ಟ್ ಕ್ಲಬ್‌ನಲ್ಲಿ ಸೇರ್ಪಡೆ ಆಗುವುದರಿಂದ ಬೇರೆ ಜಿಲ್ಲೆಯ, ರಾಜ್ಯದ, ರಾಷ್ಟçದ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತದೆ. ವಿಚಾರ ವಿನಿಮಯ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ. ವಿಭಿನ್ನ ವ್ಯಕ್ತಿತ್ವದ ವಿದ್ಯಾರ್ಥಿಗಳ ಸಂಪರ್ಕ ಸೇತುವೆಯಾಗಿ ಇಂರ‍್ಯಾಕ್ಟ್ ಕ್ಲಬ್ ಕಾರ್ಯ ನಿರ್ವಹಿಸುತ್ತದೆ ಎಂದರು.
ಪ್ರಾಚಾರ್ಯ ಪ್ರೊ. ವಿಲಿಯಂ ಡಿಸೋಜಾ ಅವರು ಪಿಯುಸಿ ನಂತರ ಸ್ವಂತ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ನಂತರ ಮುಂದೇನು ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಸಮಗ್ರ ಮಾಹಿತಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರೊ. ಸತ್ಯನಾರಾಯಣ ಮಾತನಾಡಿ, ತಂತ್ರಜ್ಞಾನ ಮುಂದುವರೆದAತೆ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿವೆ. ಇಂರ‍್ಯಾಕ್ಟ್ ಕ್ಲಬ್‌ನಿಂದ ನಾಯಕತ್ವ ಗುಣ ಹಾಗೂ ಸಮಾಜಸೇವೆ ಮತ್ತು ಭಯ ಹೋಗಲಾಡಿಸಲು ಸಹಕಾರಿಯಾಗುತ್ತದೆ. ಆದ್ದರಿಂದ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಮಾರಂಭದಲ್ಲಿ ಇಂರ‍್ಯಾಕ್ಟ್ ಕ್ಲಬ್ ನೂತನ ಅಧ್ಯಕ್ಷ ಅಭಿಷೇಕ್, ಕಾರ್ಯದರ್ಶಿ ಅಮೂಲ್ಯ ಎಂ ಅಧಿಕಾರ ಸ್ವೀಕರಿಸಿದರು. ವೇದಿಕೆಯಲ್ಲಿ ಕಾರ್ಯದರ್ಶಿ ಪ್ರೊ. ಮಡಿವಾಳರ್, ನಿಹಾಲ್ ಕೀರ್ತಿ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…