ಶಿವಮೊಗ್ಗ ನ್ಯೂಸ್…

ಈ ಹಿಂದೆ ನಡೆದ ಉಪ ಚುನಾವಣೆಗಳೆಲ್ಲಾ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರಗಳ ಫಲಿತಾಂಶ ಬರಬೇಕಾಗಿದ್ದು, ಸಿಂದಗಿಯಲ್ಲಿ ಬಿಜೆಪಿ ಜಯಗಳಿಸಿದೆ. ಹಾನಗಲ್ ನಲ್ಲಿ ಇನ್ನೂ ಮತ ಎಣಿಕೆ ಬಾಕಿ ಇದೆ. ಅಲ್ಲೂ ಕೂಡ ಗೆಲ್ಲುವ ನಿರೀಕ್ಷೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೂ 23 ಉಪ ಚುನಾವಣೆಗಳು ನಡೆದಿವೆ. ಅದರಲ್ಲಿ ಬಿಜೆಪಿ 20 ರಲ್ಲಿ ಗೆದ್ದಿದೆ. ಈ ಬಾರಿ ಎರಡು ಕ್ಷೇತ್ರಗಳಲ್ಲಿ ಈಗಾಗಲೇ ಒಂದು ಕ್ಷೇತ್ರದಲ್ಲಿ ಗೆದ್ದಿದೆ. ಇದು ದಕ್ಷಿಣ ಭಾರತದಲ್ಲಿಯೇ ಬಿಜೆಪಿ ಸಾಮರ್ಥ್ಯವನ್ನು ತೋರಿಸುತ್ತದೆ. ಬಿಜೆಪಿಯ ಅಭಿವೃದ್ಧಿಯ ಕಾರ್ಯವನ್ನು ಜನರು ಮೆಚ್ಚಿ ಬಿಜೆಪಿ ಬೆಂಬಲಿಸಿದ್ದಾರೆ. ಮತ್ತಷ್ಟು ಬಲಶಾಲಿಯಾಗಿ ಬಿಜೆಪಿ ರಾಜ್ಯದಲ್ಲಿ ಬೆಳೆಯಲಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದರು.ಇಂಧನದ ಬೆಲೆ ಪ್ರತಿದಿನ ಹೆಚ್ಚಾಗುತ್ತಿದ್ದು, ಜನಸಾಮಾನ್ಯರಿಗೆ ಹೊರೆಯಾಗುತ್ತಿದೆಯಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು.

ಇಂಧನ ಬೆಲೆ ಹೆಚ್ಚಾಗಲು ಬೇರೆ ಬೇರೆ ಕಾರಣಗಳಿವೆ. ಈಗಾಗಲೇ ಬೆಲೆ ಇಳಿಸುವತ್ತ ಚಿಂತನೆ ನಡೆದಿದೆ. ಅದಕ್ಕೂ ಮುಂಚೆ ಪರ್ಯಾಯ ಇಂಧನ ಶೋಧನೆ ಮಾಡಲಾಗುತ್ತಿದೆ. ಈ ಬಗ್ಗೆ ಹೆಚ್ಚು ಆಸಕ್ತಿ ವಹಿಸಲಾಗಿದೆ. ಪರಿಸರಕ್ಕೆ ಹಾನಿಯಾಗದಂತೆ ಪರಿಸರ ಸ್ನೇಹಿ ಇಂಧನ ಬಳಕೆಗೆ ಸರ್ಕಾರ ಒತ್ತು ಕೊಟ್ಟಿದೆ. ಮುಂದಿನ ದಿನಗಳಲ್ಲಿ ಪರ್ಯಾಯ ಇಂಧನ ಬಳಕೆಗೆ ಬರಲಿದ್ದು, ಜನರು ನೆಮ್ಮದಿಯಿಂದ ಇರುತ್ತಾರೆ ಎಂದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…