ಶಿವಮೊಗ್ಗ ನ್ಯೂಸ್…

ಈ ದಿನ ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್ ಆಸ್ಪತ್ರೆಗೆ ವಿರೋಧ ಪಕ್ಷದ ನಾಯಕರ ಯಮುನಾ ರಂಗೇಗೌಡ ಇವರ ನೇತೃತ್ವದಲ್ಲಿ ಕಾಂಗ್ರೆಸ ಪಕ್ಷದ ಪಾಲಿಕೆ ಸದಸ್ಯರುಗಳು ಭೇಟಿ ನೀಡಿದರು.

ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ನವಜಾತ ಶಿಶುಗಳ ವಾರ್ಡಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿತ್ತು. ಇದರ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು ಮುಂದೆ ಈ ರೀತಿ ಅವಗಡಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ವೈದ್ಯಾಧಿಕಾರಿಗಳ ಬಳಿ ಚರ್ಚಿಸಿ ಸೂಕ್ತ ಸಲಹೆ ನೀಡಲಾಯಿತು.

ಮೆಗ್ಗಾನ್ ಆಸ್ಪತ್ರೆಯ ಕಟ್ಟಡವು ಸಾಕಷ್ಟು ಹಳೆಯದಾಗಿದ್ದು ಈಗಿನ ಹೊಸ ಟೆಕ್ನಾಲಜಿಯ ಮಿಷನರಿಗಳ ವಯರಿಂಗ್ ಮಾಡಲು ಸಾಕಷ್ಟು ವ್ಯವಸ್ಥೆ ಇರುವುದಿಲ್ಲ ಹಾಗಾಗಿ ಸರ್ಕಾರದ ವತಿಯಿಂದ ಆದಷ್ಟು ಬೇಗ ನಮ್ಮ ಜಿಲ್ಲೆಯ ಪ್ರತಿಷ್ಠಿತ ಮೆಗ್ಗಾನ್ ಆಸ್ಪತ್ರೆಗೆ ಸೂಕ್ತ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಲಾಯಿತು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…