ಶಿವಮೊಗ್ಗ ನ್ಯೂಸ್…

ದಿನಾಂಕ 12-11-2021 ರಂದು ಡಿ.ಸಿ.ಸಿ. ಬ್ಯಾಂಕಿನ ವಿನೋಬನಗರ ಶಾಖೆಯನ್ನು ಎ.ಪಿ.ಎಂ.ಸಿ. ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಿದ ಕಾರ್ಯಕ್ರಮದ ಉದ್ಘಾಟನೆಯನ್ನು ರೈತ ಸಂಘದ ಅಧ್ಯಕ್ಷರಾದ ಶ್ರೀ ಹೆಚ್.ಆರ್. ಬಸವರಾಜಪ್ಪನವರು ಹಾಗೂ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಎಂ.ಬಿ. ಚನ್ನವೀರಪ್ಪ ನವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರು ಶ್ರೀ ಹೆಚ್.ಎಲ್. ಷಡಾಕ್ಷರಿ, ನಿರ್ದೇಶಕರಾದ ಶ್ರೀ ಎಸ್.ಪಿ. ದಿನೇಶ್, ಶ್ರೀ ಹೆಚ್.ಕೆ. ವೆಂಕಟೇಶ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಟಿ. ಮಂಜಪ್ಪ ಇವರುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…