ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ನಗರದ ಸೆಕ್ಯೂರ್ ಆಸ್ಪತ್ರೆಯಲ್ಲಿ ನೆನ್ನೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಮಕ್ಕಳ ದಿನಾಚರಣೆಯ ಅಂಗವಾಗಿ ಮಕ್ಕಳು ಸೇರಿದಂತೆ ಪೊಷಕರಿಗೆ ವಿವಿಧ ಚಟುವಟಿಕೆಗಳು ಹಾಗೂ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. 1 ರಿಂದ 6 ವರ್ಷದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ 7 ರಿಂದ 12 ವರ್ಷದ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಲ್ಲದೆ ಗೆದ್ದವರಿಗೆ ಬಹುಮಾನ ಕೂಡ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಡಾ. ವಿನಾಯಕ ಹೆಗ್ಡೆ, ಡಾ. ಅಂಜನ ರಾವ್, ಡಾ. ಹರೀಶ್, ಡಾ. ಸೌರಭ್, ಡಾ. ಅಪರ್ಣ, ಡಾ. ಅಭಿಷೇಕ್, ಡಾ.ಸುರೇಶ್, ಪ್ರವೀಣ್ ಕುಮಾರ್ ಮುಂತಾದವರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…