ಶಿವಮೊಗ್ಗ ನ್ಯೂಸ್…

ಹಂಪಿಯಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಸಂಘ (ರಿ.,)ನ ಸಭೆಯಲ್ಲಿ ರಾಜ್ಯ ಸಮಿತಿ  ನಿರ್ದೇಶಕ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಜಿ.ಆರ್. ಷಡಾಕ್ಷರಪ್ಪ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಕೊಪ್ಪಳದಿಂದ ಕುಮಾರಸ್ವಾಮಿ, ದಾವಣಗೆರೆ ಜಿಲ್ಲೆಯಿಂದ ರಾಜಪ್ಪ, ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಯಿತು.ನೂತನ ನಿರ್ದೇಶಕರನ್ನು ಸಂಘದ ಅಧ್ಯಕ್ಷರು, ಗೌರವಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಪ್ರವಾಸಿ ಮಾರ್ಗದರ್ಶಿಗಳ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಜೆ. ನಾಗರಾಜ್ ಅಭಿನಂದಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…