ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ವಿಧಾನ ಪರಿಷತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಉತ್ಸಾಹಿ ಹಾಗೂ ಯುವ ನಾಯಕ ಡಿ.ಎಸ್. ಅರುಣ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ, ಅವರು ಹೆಚ್ಚಿನ ಮತದಿಂದ ಗೆದ್ದು ಬರಲಿ ಮತ್ತು ಶುಭವಾಗಲಿ ಎಂದು ಸಂಸದ ಬಿ.ವೈ ರಾಘವೇಂದ್ರ ಹಾರೈಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯ ಬಿಜೆಪಿಯ ಅಭ್ಯರ್ಥಿ ಡಿ.ಎಸ್.ಅರುಣ್…

ಅವರು ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನೂತನ ಅಭ್ಯರ್ಥಿ ಡಿ.ಎಸ್. ಅರುಣ್ ಅವರಿಗೆ ಪಕ್ಷದ ವತಿಯಿಂದ ಸ್ವಾಗತಿಸಿ ಮಾತನಾಡಿ, ಭಾರತೀಯ ಜನತಾ ಪಕ್ಷವು ಮತ್ತೆ ಉತ್ತಮ ಕಾರ್ಯಕರ್ತರನ್ನು ಗುರುತಿಸಿದೆ. ಮೊದಲಿನಿಂದಲೂ ಕೂಡ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಅನುಭವದ ಜೊತೆಗೆ ಪಕ್ಷದ ಹಿರಿಯರ ಆಶೀರ್ವಾದದಿಂದ ಡಿ.ಎಸ್. ಅರುಣ್ ಆಯ್ಕೆಯಾಗಿದ್ದಾರೆ.

ಸಂಘಟನೆಗೆ ಬಲ ತುಂಬುವ ಕೆಲಸವನ್ನು ಮಾಡೋಣ ಎಂದರು.ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್. ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್, ಭಾನುಪ್ರಕಾಶ್, ವಿಧಾನಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ್ರು. ಆಯನೂರು ಮಂಜುನಾಥ್, ಮುಖಂಡ ಎಸ್. ದತ್ತಾತ್ರಿ.ಹಾಗೂ ವಿವಿಧ ಮೋರ್ಚಾದ ಪ್ರಮುಖರು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…