ಆರ್.ಶೇಜೇಶ್ವರ.,ಸಹಾಯಕ ನಿರ್ದೇಶಕರು, ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ.,ಶಿವಪ್ಪನಾಯಕ ಅರಮನೆ ಶಿವಮೊಗ್ಗ ಹಾಗೂ ಉಪನಿರ್ದೇಶಕರು(ಪ್ರಭಾರ) ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ.,ಧಾರವಾಡ.

ಇವರು ಚಿತ್ರದುರ್ಗ ಜಿಲ್ಲೆ,ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಶ್ರೀ ರುದ್ರಪ್ಪ., ಶ್ರೀಮತಿ ಓಂಕಾರಮ್ಮ ಇವರ ಮಗನಾಗಿದ್ದು., ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ.ಹನುಮನಾಯಕ ಇವರ ಮಾರ್ಗದರ್ಶನದಲ್ಲಿ “ಚಿತ್ರದುರ್ಗ ಜಿಲ್ಲೆಯ ಚಾರಿತ್ರಿಕ ಮತ್ತು ಸಾಂಸ್ಕೃತಿಕ ಭೂಗೋಳ ; ಒಂದು ಅಧ್ಯಯನ(ಪೂರ್ವ ಇತಿಹಾಸದ ಕಾಲದಿಂದ ಕ್ರಿ.ಶ 18ನೇ ಶತಮಾನದವರೆಗೆ)” ಎಂಬ ವಿಷಯದ ಕುರಿತು ಸಾದರಪಡಿಸಿದ ಪಿಎಚ್.ಡಿ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನಮಾಡಿ ಗೌರವಿಸಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…