ದಿನಾಂಕ 02.06.2021ರ ಬುಧವಾರದಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಕೋವಿಡ್-19 ನ ಅಲೆ ವ್ಯಾಪಕವಾಗಿ ಹರಡಿದ್ದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್‌ ಸಮಿತಿ ಪರಿಶೀಲನಾ ಸಭೆಯನ್ನು ಶಿವಮೊಗ್ಗ ತಾಲ್ಲೂಕಿನ ಅಬ್ಬಲಗೆರೆ, ಕುಂಚೇನಹಳ್ಳಿ, ಮಲ್ಲಾಪುರ ಹಾಗೂ ರಾಮನಗರ ಗ್ರಾಮ ಪಂಚಾಯತಿಯಲ್ಲಿ ನಡೆಸಿದರು. ಹಾಗೂ ಈ ಸಮಯದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ನಿಂದ ಮೃತ ಪಟ್ಟ ಕುಟುಂಬದವರಿಗೆ ಸಹಾಯಧನವನ್ನು ವಿತರಿಸಿದರು.

ಈ ಸಮಯದಲ್ಲಿ ಮಾತನಾಡಿ ಕೊರೋನ 2ನೇ ಅಲೆ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರುತ್ತಿದೆ ಇದರಿಂದ ಗ್ರಾಮಗಳಲ್ಲಿ ಮರಣ ಪ್ರಮಾಣ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ರೋಗ ಬರದಂತೆ ಎಚ್ಚರ ವಹಿಸೋಣ ಎಲ್ಲಾರು ಒಟ್ಟಾಗಿ ಕೆಲಸ ಮಾಡೊಣ ಎಂದರು.

ಈ ಸಂಧರ್ಭದಲ್ಲಿ ಮಾಜಿ‌ ಜಿ.ಪಂ ಸದಸ್ಯರು ಸೌಮ್ಯಭೋಜನಾಯ್ಕ, ತಹಶಿಲ್ದಾರ್ ನಾಗರಾಜ್ ರವರು, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಕಲ್ಲಪ್ಪ ರವರು, ಪೋಲಿಸ್ ನಿರೀಕ್ಷಕರು, ಆರೋಗ್ಯ ಇಲಾಖೆಯವರು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಯವರು, ಗ್ರಾ.ಪಂ ಅಧಕ್ಷರು ಮತ್ತು ಉಪಾಧಕ್ಷರು, ಪಿ.ಡಿ.ಒ ರವರು, ಕಂದಾಯ ಇಲಾಖೆ ಅಧಿಕಾರಿಗಳು, ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಹಾಜರಿದ್ದರು. ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ