ಬೆಂಗಳೂರು : ಇಂದು ಬೆಂಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಅಖಿಲ ಭಾರತ ಶ್ರಮಿಕ ಸ್ವರಾಜ್ ಕೇಂದ್ರ ಕರ್ನಾಟಕ ವತಿಯಿಂದ ದಿಟ್ಟ ಪತ್ರಕರ್ತೆ ಹುತಾತ್ಮ ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆ ಉಚಿತ ಆಂಬ್ಯುಲೆನ್ಸ್ ಸೇವೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕಲೀಮುಲ್ಲಾ ಅವರು ಕನ್ನಡದ ಹೆಸರಾಂತ ದಿಟ್ಟ ಪತ್ರಕರ್ತೆ ಹುತಾತ್ಮ ಗೌರಿ ಲಂಕೇಶ್ ಅವರ ಹೆಸರಿನಲ್ಲಿ ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದಿಂದ ಬೆಂಗಳೂರಿಗೆ ವಲಸೆ ಬಂದು ನೆಲೆ ಕಂಡಿರುವ ಬಡ ವಲಸೆ ಕಾರ್ಮಿಕರಿಗೆ ಅನುಕೂಲವಾಗಲೆಂದು ಉಚಿತ ಆಂಬುಲೆನ್ಸ್ ಸೇವೆ ಒದಗಿಸುತ್ತಿದ್ದೇವೆ. ಅಖಿಲ ಭಾರತ ಶ್ರಮಿಕ ಸ್ವರಾಜ್ ಕೇಂದ್ರ ಕರ್ನಾಟಕ ವತಿಯಿಂದ ನಡೆದ ಉದ್ಘಾಟನೆಯಲ್ಲಿ ಗೌರಿ ಲಂಕೇಶ್ ಅವರ ಸಹೋದರಿ ಸಿನಿಮಾ ನಿರ್ದೇಶಕಿ ಕವಿತಾ ಲಂಕೇಶ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

ಈ ಸಂದರ್ಭದಲ್ಲಿ ಅಕ್ಕೈ ಪದ್ಮಶಾಲಿ , ಸಾಜಿದ ಬೇಗಂ , ಆದಿ ಸತ್ಯನಾರಾಯಣ್ ವೀರಸಂಗಪ್ಪ ಮುಬಾರಕ್ ಮುಂತಾದವರು ಉಪಸ್ಥಿತರಿದ್ದರು

Ambulance contact : 8123645998

ವರದಿ: ಮಂಜುಳಾ ರೆಡ್ಡಿ ಬೆಂಗಳೂರು