ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 20 ವರ್ಷಗಳಿಂದ ನಿವೃತ್ತಿಯಾದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ದಿನಾಂಕ 05.12.2021ರಂದು ಶಿವಮೊಗ್ಗ ಜಿಲ್ಲಾ ಅಡಿಕೆ ಮಂಡಿ ವರ್ತಕರ ಸಂಘದ ಸಭಾಂಗಣ, ಆರ್ ಎಂ ಸಿ ಆವರಣ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸ್ನೇಹ ಸಮ್ಮಿಲನ ಕೂಟವನ್ನು ಏರ್ಪಡಿಸಲಾಗಿತ್ತು.

ಎಲ್ಲಾ ನಿವೃತ್ತ ನೌಕರರುಗಳು ಹರ್ಷವನ್ನು ವ್ಯಕ್ತಪಡಿಸಿದ್ದರು. ಈ ಸಮ್ಮೇಳನ ಕೂಟವು ಇನ್ನು ಮುಂದೆ ಪ್ರತಿ ವರ್ಷವು ಸಹ ಆಯೋಜಿಸಲು ಕೋರಿದರು. ನಿವೃತ್ತರ ಸಮ್ಮಿಲನ ಕೂಟಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹಕರಿಸಿದರು. ಈ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಮೂಡಿಬಂದಿತು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…