ಶಿವಮೊಗ್ಗ: ಮೊದಲಿನಿಂದಲೂ ಗೆಲ್ಲುವ ವಿಶ್ವಾಸವಿತ್ತು. ನಮ್ಮ ನಾಯಕರಾದ ಯಡಿಯೂರಪ್ಪ, ಈಶ್ವರಪ್ಪ, ರಾಘವೇಂದ್ರ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರ ಶ್ರಮದಿಂದ ಗೆಲುವು ಸಿಕ್ಕಿದೆ ಎಂದು ಡಿ.ಎಸ್. ಅರುಣ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೆಲಸಗಳು, ಸಂಘಟಿತ ಪ್ರಯತ್ನ, ಮತದಾರರ ಪರಿಶ್ರಮ ಗೆಲುವಿನ ಹಿಂದೆ ಇದೆ. ಈ ಗೆಲುವನ್ನು ಮತದಾರರು, ನಮ್ಮ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ.

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನ ನಡೆಸುತ್ತೇನೆ ಎಂದರು. ಇಡೀ ಕ್ಷೇತ್ರದಲ್ಲಿ ಬೆಂಬಲ ವ್ಯಕ್ತವಾಗಿದೆ.

ಚುನಾವಣೆ ಘೋಷಣೆಗೆ ಮೊದಲೇ ನಡೆದ ಜನಸ್ವರಾಜ್ ಸಮಾವೇಶದಲ್ಲಿ ಬೆಂಬಲ ಕಂಡು ಬಂದಿತ್ತು. ಕೇವಲ 21 ದಿನದಲ್ಲಿ ಅಭ್ಯರ್ಥಿ ಘೋಷಿಸಿ ಏನೂ ಮಾಡಲು ಆಗಲ್ಲ. ನಾನು ಪದನಿಮಿತ್ತ ಮಾತ್ರ. ಈ ಗೆಲುವಿನ ಹಿಂದೆ ಕಾರ್ಯಕರ್ತರ ಶ್ರಮ ಇದೆ ಎಂದು ಅರುಣ್ ಹೇಳಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…