ಶಿವಮೊಗ್ಗ: ಕಾರ್ಯಕರ್ತರ ಪರಿಶ್ರಮ, ಪಕ್ಷದ ಹಿರಿಯರ ಆಶೀರ್ವಾದದಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧ್ಯವಾಯಿತು ಎಂದು ವಿಧಾನ ಪರಿಷತ್ ವಿಜೇತ ಅಭ್ಯರ್ಥಿ ಡಿ.ಎಸ್.ಅರುಣ್ ಹೇಳಿದರು.

ಶಿವಮೊಗ್ಗ ನಗರದ ನಮ್ಮ ಟಿವಿ ಶಿವಮೊಗ್ಗದ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಇಂದು ಸಾಧಿಸಿರುವ ಗೆಲುವು ನನ್ನದಲ್ಲ. ನನ್ನ ಪಕ್ಷದ ಗೆಲುವು. ನನ್ನ ಜತೆಯಲ್ಲಿ ಹಗಲಿರುಳು ದುಡಿದ ಕಾರ್ಯಕರ್ತರು ಹಾಗೂ ಸ್ನೇಹಿತರ ಗೆಲುವು ಇದಾಗಿದೆ ಎಂದು ತಿಳಿಸಿದರು.

ಗ್ರಾಮಾಂತರ ಪ್ರದೇಶದಲ್ಲಿ ಜನರ ವಿಶ್ವಾಸ ಹಾಗೂ ಆಶೀರ್ವಾದ ನನಗೆ ವರದಾನವಾಯಿತು. ಬರುವ ದಿನಗಳಲ್ಲಿ ಸಾಕಷ್ಟು ಸಮಾಜಮುಖಿ ಯೋಜನೆಗಳನ್ನು ಮಾಡುವ ಉದ್ದೇಶವಿದೆ. ಪಕ್ಷದ ಸಂಘಟನೆ ಬಲಿಷ್ಠಗೊಳಿಸುವ ರೀತಿಯಲ್ಲಿ ಕೆಲಸಗಳನ್ನು ಮಾಡುತ್ತಿರುತ್ತೇನೆ. ನನಗೆ ಸಿಕ್ಕಿರುವ ಜವಾಬ್ದಾರಿಯು ನನ್ನ ಕರ್ತವ್ಯವನ್ನು ಹೆಚ್ಚಿಸಿದೆ ಎಂದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಅತ್ಯಂತ ಹೆಚ್ಚಿನ ಸಂತೋಷ ಮೂಡಿಸಿದೆ. ವಿಧಾನ ಪರಿಷತ್ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನರ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮಾಡುತ್ತೇನೆ ಎಂದು ಹೇಳಿದರು.

ನಮ್ಮ ಟಿವಿ ಮಾಲೀಕ ಜಗದೀಶ್ ಅವರು ವಿಧಾನ ಪರಿಷತ್ ವಿಜೇತ ಅಭ್ಯರ್ಥಿ ಡಿ.ಎಸ್.ಅರುಣ್ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ನಿರೂಪಕ ಜಿ.ವಿಜಯ್‌ಕುಮಾರ್, ಶ್ರೀಕಾಂತ್, ರಾಣಿ ಬಾಳೆಕೊಪ್ಪ, ಕೋಟ್ರೇಶ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…