ಶಿವಮೊಗ್ಗ: ನಗರದ ಕಲ್ಲಳ್ಳಿಯಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರದ ವತಿಯಿಂದ 2021ನೇ ಸಾಲಿನ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ, ಹಿರಿಯ ಯೋಗ ಗುರುಗಳಾದ ಬಾ.ಮ.ಶ್ರೀಕಂಠ ಅವರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಇದೇ ಸಂದರ್ಭದಲ್ಲಿ ಶ್ರೀ ಶಿವಗಂಗಾ ಯೋಗಕೇಂದ್ರದ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಮಾತನಾಡಿ, ಹಿರಿಯ ಯೋಗಗುರುಗಳಾದ ಬಾ.ಮ.ಶ್ರೀಕಂಠ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಸಂಘ ಪರಿವಾರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿರುವ ಇವರಿಗೆ ಸನ್ಮಾನಿಸುತ್ತಿರುವುದು ನಮ್ಮೆಲ್ಲರ ಪುಣ್ಯ ಎಂದು ತಿಳಿಸಿದರು.

ಬಾ.ಮ.ಶ್ರೀಕಂಠ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಶಿವಮೊಗ್ಗ ಜಿಲ್ಲೆಗೆ ಹೆಮ್ಮೆ ತಂದಿದೆ. ಇವರ ಯೋಗ ಕ್ಷೇತ್ರದಲ್ಲಿನ ಸಾಧನೆ ರಾಜ್ಯಕ್ಕೆ ಮಾದರಿಯಾಗಿದೆ. ಇವರ ಆದರ್ಶಗಳು ನಮ್ಮೆಲ್ಲರಿಗೂ ಮಾದರಿ ಎಂದು ಹೇಳಿದರು.
ಉತ್ತಮ ಆರೋಗ್ಯ ಕಾಪಾಡಿಕೊಳ್ಳುವ ದೃಷ್ಠಿಯಿಂದ ಎಲ್ಲರೂ ಯೋಗ ಅಭ್ಯಾಸ ಮಾಡಬೇಕು. ಹಿರಿಯ ಯೋಗ ಗುರುಗಳಿಂದ ಸರಿಯಾದ ರೀತಿಯಲ್ಲಿ ಯೋಗ ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಪ್ರತಿ ನಿತ್ಯ ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಶಿವಗಂಗಾ ಯೋಗಕೇಂದ್ರದ ಸಿ.ವಿ.ರುದ್ರಾರಾಧ್ಯ, ನರರೋಗ ತಜ್ಞ ಡಾ. ಶಿವರಾಮಕೃಷ್ಣ, ಡಾ. ಎನ್.ಎಲ್.ನಾಯಕ್, ಯೋಗಪಟು ಜಿ.ವಿಜಯ್‌ಕುಮಾರ್, ಡಾ. ಪರಿಸರ ನಾಗರಾಜ್, ವಿಜಯ್ ಬಾಯರ್, ಲವಕುಮಾರ್, ಡಾ. ಪ್ರವೀಣ್ ಕುಮಾರ್ ದೇವರಬಾವಿ, ಡಯಾಬಿಟಿಕ್ ಕೇರ್ ಸೆಂಟರ್‌ನ ಜಿ.ಎನ್.ಎನ್.ಮೂರ್ತಿ, ರಂಗನಾಥ್, ಯೋಗಶಿಕ್ಷಕ ಓಂಕಾರ್ ಹಾಗೂ ಯೋಗಪಟುಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…