ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಯುವ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ಗುಣರಂಜನ್ ಶೆಟ್ಟಿರವರ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷರಾದ ಆರ್.ಚಂದ್ರಪ್ಪ ಮತ್ತು ಬೆಂಗಳೂರು ಜಿಲ್ಲೆ ಅಧ್ಯಕ್ಷರಾದ ಜೆ ಶ್ರೀನಿವಾಸ್ ರವರ ಅಧ್ಯಕ್ಷತೆಯಲ್ಲಿ ಶಿವಸೇನೆ ಮತ್ತು ಎಂ.ಇ.ಎಸ್.ಪುಂಡರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಪ್ರತಿಮೆಯನ್ನು ಭಗ್ನಗೋಳಿಸಿರುವ ವಿಚಾರವಾಗಿ ಅವರನ್ನು ಕೂಡಲೇ ಬಂಧಿಸಿ ಗಲ್ಲಿಗೇರಿಸಬೇಕೆಂದು ಭೂತ ದಹನ ಮಾಡುವ ಮುಖೇನ ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಯಿತು ಮತ್ತು ಕೂಡಲೇ ಎಂ.ಇ.ಎಸ್ ಹಾಗೂ ಶಿವಸೇನೆ ಪುಂಡರನ್ನು ಗಡಿಪಾರು ಮಾಡಬೇಕು ಇದರ ಬಗ್ಗೆ ಸರ್ಕಾರ ಮದ್ಯಪ್ರವೇಶ ಮಾಡಿ ಆದೇಶ ಹೊರಡಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರವಾದ ಹೋರಾಟಗಳನ್ನು ಮಾಡುತ್ತೇವೆ ಎಂದು ಡಿಜಿ ಕಛೇರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಮಹಾಪ್ರಧಾನ ಸಂಚಾಲಕರಾದ ಶ್ರೀ ಶೇ.ಭೋ.ರಾಧಕೃಷ್ಣ,ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀ ರವಿಕುಮಾರ್,ಶ್ರೀ ಕೃಷ್ಣಮೂರ್ತಿ ,ಬೆಂ.ನಗರ ಉಪಾಧ್ಯಕ್ಷರಾದ ಶ್ರೀ ಆನಂದಪುರ ಸೂರಿ,ಶ್ರೀ ಕೆ.ವೆಂಕಟೇಶ, ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಅನಿಲ್ ಶೆಟ್ಟಿ,ಶ್ರೀ ನೀಲಕಂಠೇಗೌಡ(ನಾರಾಯಣ),ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ವೀರಭದ್ರೆಗೌಡ,ಕ್ಷೇತ್ರದ ಅಧ್ಯಕ್ಷರುಗಳಾದ ಗಾಂಧಿನಗರ ಪೂರ್ಣೇಶ,ಹಾಗೂ ಪಧಾದಿಕಾರಿಗಳು,ಘಟಕ ಅಧ್ಯಕ್ಷರು ಮತ್ತು ಪಧಾದಿಕಾರಿಗಳು, ಮಹಿಳಾ ಪದಾಧಿಕಾರಿಗಳು ಇನ್ನೂ ಇತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…