ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆ ಕೋವಿಡ್ ಲಸಿಕಾ ಕೇಂದ್ರದಲ್ಲಿ ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವ ನೋಡಲ್ ಅಧಿಕಾರಿಯಾದ ಡಾ:ಪ್ರವೀಣ್‌ಕುಮಾರ್‌ರವರನ್ನು ಏಕಾಏಕಿ ಬದಲಾವಣೆ ಮಾಡಿರುವುದು ತೀವ್ರ ಖಂಡನೀಯ. ಈ ಕೂಡಲೇ ನೋಡಲ್ ಅಧಿಕಾರಿಯ ಬದಲಾವಣೆ ಮಾಡಿರುವ ಆದೇಶವನ್ನು ಹಿಂಪಡೆದು ಈಗಿರುವ ನೋಡಲ್ ಅಧಿಕಾರಿಯು ಯಥಾಸ್ಥಿತಿಯಾಗಿ ಕರ್ತವ್ಯ ನಿರ್ವಹಿಸಲು ಆದೇಶಿಸಬೇಕೆಂದು ಈ ಮೂಲಕ ಯುವ ಕಾಂಗ್ರೆಸ್ ಆಗ್ರಹಿಸಿತು. ಮನವಿಯ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್ ಗ್ರಾಮಾಂತರ ಅಧ್ಯಕ್ಷ ಈ.ಟಿ. ನಿತಿನ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಕಾಂಗ್ರೆಸ್ ಎಸ್. ಕುಮರೇಶ್, ಪದಾಧಿಕಾರಿಗಳಾದ ವೆಂಕಟೇಶ್ ಕಲ್ಲೂರು, ಕೆ.ಎಲ್. ಪವನ್, ರಾಹುಲ್ ,ಗಗನ್ ಗೌಡ ಇತರರು ಇದ್ದರು

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ