ಶಿವಮೊಗ್ಗ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದುರ್ಗಿಗುಡಿ ಕನ್ನಡ ಸಂಘ ಇಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕಿತ್ತೂರಿನ ಕೆಚ್ಚದೆಯ ಗಂಡುಗಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಕಿಡಿಗೇಡಿಗಳು ವಿರೂಪಗೊಳಿಸಿರುವುದಕ್ಕೆ ದುರ್ಗಿಗುಡಿ ಕನ್ನಡ ಸಂಘ ತೀವ್ರವಾಗಿ ಖಂಡಿಸುತ್ತದೆ.

ಇದು 6 ಕೋಟಿ ಕನ್ನಡಿಗರಿಗೆ ಆದ ಅವಮಾನವಾಗಿದೆ. ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಸ.ನ. ಮೂರ್ತಿ, ವೇಣುಗೋಪಾಲ್ ಟಿ. ನಾಗರಾಜ್ ನರಸಿಂಹ ಗಂಧದಮನೆ, ನಿಂಗರಾಜ್, ಗಿರೀಶ್, ಯೋಗೀಶ್, ಹನುಮಂತಪ್ಪ, ತೇಜಸ್ವಿ ಕುಮಾರ್, ಮಂಜುನಾಥ್, ಗೋವಿಂದರಾಜ್, ಶ್ರೀನಿವಾಸ್ ಇದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…