ಶಿವಮೊಗ್ಗ: ತಮ್ಮ ಸೇವೆಯನ್ನು ಕಾಯಂಗೊಳಿಸಬೇಕೆಂದು ಆಗ್ರಹಿಸಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು 5 ನೇ ದಿನವಾದ ಇಂದು ಮಜ್ಜಿಗೆ ಮಾರಾಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಜಾಹೀರಾತು
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 2021-23 ಸಾಲಿನ ಆಡಳಿತ ಮಂಡಳಿ ಚುನಾವಣೆ ಡಿಸೆಂಬರ್ 26 ಭಾನುವಾರ ನಡೆಯಲಿದೆ.. ಈ ಆಡಳಿತ ಮಂಡಳಿಯ ಚುನಾವಣೆಗೆ ಪರಿವರ್ತನಾ -XI ಸಮೂಹ ದಿಂದ ಶರಾವತಿ ಸಿರಾಮಿಕ್ಸ್ ಹೌಸ್ ನ ಮಾಲೀಕರಾದ ಮರಿಸ್ವಾಮಿ ಆದ ನಾನು ರೋಟರಿ ರಿವರ್ಸ್ ಸೈಟ್ ನ ಅಧ್ಯಕ್ಷನಾಗಿ, ಚಂದನ ಜ್ಯೂನಿಯರ್ ಚೇಂಬರಿನ ಅಧ್ಯಕ್ಷನಾಗಿ, ಸಹ್ಯಾದ್ರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದೇನೆ, ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಚುನಾವಣೆಗೆ ಪ್ರತಿನಿಧಿಸುತ್ತಿದ್ದಾರೆ.. ಇವರ ಕ್ರಮಸಂಖ್ಯೆ 17 ದಯಮಾಡಿ ಈ ಕ್ರಮ ಸಂಖ್ಯೆಗೆ ಅಮೂಲ್ಯವಾದ ಮತವನ್ನು ಮಾಡಬೇಕಾಗಿ ವಿನಂತಿಸುತ್ತೇನೆ . 🙏

ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಅತಿಥಿ ಉಪನ್ಯಾಸಕರು ಕಳೆದ 5 ದಿನಗಳಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ರಾಜ್ಯದ 430 ಪ್ರಥಮದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಜೀವನ ಭದ್ರತೆಯೇ ಇಲ್ಲವಾಗಿದೆ. ಸರ್ಕಾರದ ಸೌಲಭ್ಯಗಳ್ಯಾವು ಅವರಿಗೆ ಸಿಗುತ್ತಿಲ್ಲ. ಅತಿಥಿ ಉಪನ್ಯಾಸಕರ ಸೇವೆಯನ್ನು ನಿಯಮ 14 ರ ಅಡಿಯಲ್ಲಿ ವಿಲೀನಗೊಳಿಸಬೇಕು. ಅವರನ್ನು ಕಾಯಂಗೊಳಿಸಬೇಕು.

ಕಾಯಂಗೊಳಿಸುವವರೆಗೂ ಅಂದರೆ ಸೇವಾ ವಿಲೀನ ಪ್ರಕ್ರಿಯೆ ಪೂರ್ಣಗೊಳಿಸುವವರೆಗೂ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಯನ್ನು ತಡೆಯಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ ಅತಿಥಿ ಉಪನ್ಯಾಸಕರು ಹೀಗೆ ಮಜ್ಜಿಗೆ ಮಾರಾಟ ಮಾಡಿ ಜೀವನ ಸಾಗಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡರು.ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ಡಾ. ಹೆಚ್. ಸೋಮಶೇಖರ್ ಶಿಮೊಗ್ಗಿ, ಖಜಾಂಚಿ ರಾಜೇಶ್ ಕುಮಾರ್, ಜಿಲ್ಲಾಧ್ಯಕ್ಷ ಸರ್ವಜ್ಞಮೂರ್ತಿ, ಸತೀಶ್ ಮೊದಲಾದವದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…