ಶಿವಮೊಗ್ಗ: ಕರ್ನಾಟಕ ರಾಜ್ಯ ಜ್ಯೂವೆಲ್ಲರಿ ಫೇಡರೇಷನ್ ವತಿಯಿಂದ ಆಯೋಜಿಸಿದ್ದ ಬೆಂಗಳೂರಿನ ಜ್ಯೂವೆಲ್ಲರಿ ಭವನದ ಉದ್ಘಾಟನಾ ಸಮಾರಂಭದಲ್ಲಿ ಶಿವಮೊಗ್ಗದ ಚಿನ್ನ ಬೆಳ್ಳಿ ಗಿರವಿ ವರ್ತಕರ ಸಂಘದ ಉಪಾಧ್ಯಕ್ಷ ವಿನೋದ್‌ಕುಮಾರ್ ಅವರು ಸಮಾಜಸೇವೆ ಹಾಗೂ ಸಂಸ್ಥೆಗೆ ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ರಾಜ್ಯ ವಾಣಿಜ್ಯ ಮಹಾಮಂಡಳಿ ವತಿಯಿಂದ ಸನ್ಮಾನಿಸಲಾಯಿತು.

ವಿನೋದ್ ಕುಮಾರ್ ಅವರು ಸಮಾಜಮುಖಿ ಕೆಲಸಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಸೇವಾ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಸೇವಾ ಕಾರ್ಯಗಳಲ್ಲಿ ಕೈಜೋಡಿಸಿ ಆರ್ಥಿಕ ನೆರವು ಒದಗಿಸುವ ಮೂಲಕ ಸಾಮಾಜಿಕ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಸಲ್ಲಿಸಿದ್ದಾರೆ. ಇವರ ಉತ್ತಮ ಕಾರ್ಯ, ನಿಸ್ವಾರ್ಥ ಮನೋಭಾವ ಗಮನಿಸಿ ರಾಜ್ಯ ಜ್ಯೂವೆಲ್ಲರಿ ಫೇಡರೇಷನ್ ವತಿಯಿಂದ ಗೌರವ ಸಲ್ಲಿಸಿ ಅಭಿನಂದಿಸಲಾಯಿತು.

ಶಿವಮೊಗ್ಗದ ಚಿನ್ನ ಬೆಳ್ಳಿ ಗಿರವಿ ವರ್ತಕರ ಸಂಘದ ಉಪಾಧ್ಯಕ್ಷ ವಿನೋದ್‌ಕುಮಾರ್ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜೆ.ಆರ್.ವಾಸುದೇವ್ ಹಾಗೂ ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.
ರಾಜ್ಯ ವಾಣಿಜ್ಯ ಮಹಾಮಂಡಳಿ ಅಧ್ಯಕ್ಷ ಐ.ಎಸ್.ಪ್ರಸಾದ್ ಹಾಗೂ ರಾಜ್ಯ ಚಿನ್ನ ಬೆಳ್ಳಿ ವರ್ತಕರ ಒಕ್ಕೂಟದ ಅಧ್ಯಕ್ಷ ಡಾ. ಜಯಾಚಾರ್, ಸುಮೇಶ್ ವಡೇರ್, ರಾಜಶೇಖರ್, ಚಂಪಲಾಲ್, ರಾಜ್ಯದ ಆಡಳಿತ ಮಂಡಳಿ ನಿರ್ದೇಶಕರು, ಜಿಲ್ಲಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…