ಶಿವಮೊಗ್ಗ: ರಾಜ್ಯಮಟ್ಟದ ಸಹಕಾರ ಇಲಾಖೆಯ ಅಡಿಯಲ್ಲಿ ಬರುವ ಲೈಸನ್ಸ್ ಪಡೆದ ಹಣಕಾಸು ಸಂಸ್ಥೆಗಳ ಸದಸ್ಯರನ್ನು ಒಳಗೊಂಡ ಬೆಂಗಳೂರಿನಲ್ಲಿರುವ ಅಖಿಲ ಕರ್ನಾಟಕ ಫೈನಾನ್ಸಿರ‍್ಸ್ ಅಸೋಸಿಯೇಷನ್ ಕಾರ್ಯಕಾರಿಣಿಗೆ ನಾಮಕರಣ ಸದಸ್ಯರಾಗಿ ಒಂದು ವರ್ಷದ ಅವಧಿಗೆ ಶಿವಮೊಗ್ಗ ನಗರದ ಸವಾರ್‌ಲೇನ್ ರಸ್ತೆಯ ಸಾವಿತ್ರಮ್ಮ ಫೈನಾನ್ಸ್ನ ಮಾಲೀಕರಾದ ಜಿ.ವಿಜಯ್‌ಕುಮಾರ್ ಆಯ್ಕೆಯಾಗಿದ್ದಾರೆ.

2021ರ ಡಿಸೆಂಬರ್ 19ರಿಂದ 2022ರ ಡಿಸೆಂಬರ್ 19ರವರೆಗೆ ಒಂದು ವರ್ಷದ ಅವಧಿಗೆ ಜಿ.ವಿಜಯ್‌ಕುಮಾರ್ ಅವರನ್ನು ನಾಮಕರಣ ಸದಸ್ಯರಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅಸೋಸಿಯೇಷನ್ ಏಳಿಗೆ ಮತ್ತು ಬೆಳವಣಿಗೆಯಲ್ಲಿ ಶ್ರಮಿಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ಟಿ.ರಾಜಶೇಖರ್, ಪ್ರಧಾನ ಕಾರ್ಯದರ್ಶಿ ಕೆ.ಆರ್.ಪ್ರಸನ್ನಕುಮಾರ್, ಕಾರ್ಯಾಧ್ಯಕ್ಷ ಬಿ.ಶಿವರಾಮ ಹಾಗೂ ಇನ್ನುಳಿದ ಪದಾಧಿಕಾರಿಗಳು ಸರ್ವಾನುಮತದಿಂದ ಆಯ್ಕೆ ಪ್ರಕ್ರಿಯೆ ನಡೆಸಿ ಆದೇಶಿಸಿದ್ದಾರೆ.

ಜಿ.ವಿಜಯ್‌ಕುಮಾರ್ ಅವರು ಶಿವಮೊಗ್ಗ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ರಾಜ್ಯಮಟ್ಟದ ವಿವಿಧ ಸಂಘಟನೆಗಳಲ್ಲಿಯೂ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ರೋಟರಿ ಸಹಾಯಕ ಗವರ್ನರ್, ವಾಣಿಜ್ಯ ಸಂಘದ ಜಂಟಿ ಕಾರ್ಯದರ್ಶಿ ಸೇರಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಸೈಕಲ್‌ನಲ್ಲಿ ಗಿನ್ನೆಸ್ ದಾಖಲೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಕ್ತದಾನವನ್ನು ನಿರಂತರವಾಗಿ ಮಾಡುತ್ತಾರೆ. ನಮ್ಮ ಟಿವಿ ನಿರೂಪಕ ಹಾಗೂ ವರದಿಗಾರರಾಗಿಯು ಕಾರ್ಯ ನಿರ್ವಹಿಸುತ್ತಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…