1. ರಾಜ್ಯದಲ್ಲಿ ಕೊರೋನಾ ವೈರಸ್ (ಕೋವಿಡ-19) ಎರಡನೇ ಅಲೆಯೂ ಹರಡುತ್ತಿರುವ ಹಿನ್ನೆಲೆಯಲ್ಲಿ ಸಮಸ್ಯೆಗೆ ಒಳಗಾದ ರಾಜ್ಯದ ನಾಗರಿಕರಿಗೆ ಪರಿಹಾರ ಕಲ್ಪಿಸುವ ಸಲುವಾಗಿ ರಾಜ್ಯ ಸರ್ಕಾರದ “ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ” ಸಹಕಾರಿ ಕ್ಷೇತ್ರವಾದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ , ಜಿಲ್ಲೆಯ ಎಲ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು , ಪಟ್ಟಣ ಸಹಕಾರ ಬ್ಯಾಂಕುಗಳು ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘಗಳು , ಇದ್ದರೆ ಕೃಷಿ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಗಳು ಹಾಗೂ ಬ್ಯಾಂಕಿನ ನೌಕರರಿಂದ ದೇಣಿಯಾಗಿ ರೂ.50,00,000/- (ರೂ. ಐವತ್ತು ಲಕ್ಷಗಳು ಮಾತ್ರ ) ಗಳು ಸಾಂಗ್ ಸಂಗ್ರಹಣೆಯಾಗಿದ್ದು ,ಸದರಿ ಮೊತ್ತವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತಿದ್ದು ಉದಾರವಾಗಿ ದೇಣಿಗೆ ನೀಡಿದ ಎಲ್ಲ ಸಹಕಾರ ಸಂಘ ಸಂಸ್ಥೆಗಳ ಆಡಳಿತ ಮಂಡಳಿಗೆ ಬ್ಯಾಂಕಿನ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿತ್ತು.
  2. ಜಿಲ್ಲೆಯ ಸಹಕಾರ ಕ್ಷೇತ್ರದ ವತಿಯಿಂದ ಸಹ ಸಂಗ್ರಹಣೆಯಾಗಿರುವ ದೇಣಿಗೆಯನ್ನು ಮುಖ್ಯಮಂತ್ರಿಗಳ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ , ಸಂಕಷ್ಟಕ್ಕೀಡಾಗಿರುವ ನಾಗರಿಕರ ಅನುಕೂಲಕ್ಕೆ ವಿನಿಯೋಗವಾಗುವಂತೆ ಜಿಲ್ಲೆಯ ಎಲ್ಲ ಸಹಕಾರಿ ಸಂಸ್ಥೆಗಳ ಪರವಾಗಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗುತ್ತದೆ .
  3. ಕೊರೋನಾವೈರಸ್ ಎರಡನೇ ಅಲೆಯ ಈ ಸಂಕಷ್ಟದ ಸಂದರ್ಭದಲ್ಲಿಯೂ ಸಹಾ ಗ್ರಾಮೀಣ ಭಾಗದ ರೈತರಿಗೆ , ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಬ್ಯಾಂಕಿನಿಂದ ಒಟ್ಟು 65156 ಸದಸ್ಯರಿಗೆ ರೂ. 656.20 ಕೋಟಿ ಅಲ್ಪಾವಧಿ ಕೃಷಿ ಬೆಳೆ ಸಾಲ ಒದಗಿಸಲಾಗುತ್ತದೆ.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ.