ಶಿವಮೊಗ್ಗ: ಜಿಲ್ಲೆಯಲ್ಲಿ ಎರಡು ಮುಕ್ಕಾಲು ವರ್ಷದಿಂದ ಹೆಚ್ಚುವರಿ ರಕ್ಷಣಾಧಿಕಾರಿಗಳಾಗಿ ಉತ್ತಮ ಹಾಗೂ ದಕ್ಷತಯಿಂದ  ಕಾರ್ಯನಿರ್ವಹಿಸುತ್ತಿರುವ ಡಾ. ಹೆಚ್.ಟಿ. ಶೇಖರ್ ಅವರಿಗೆ ಐಪಿಎಸ್ ಆಗಿ ಮುಂಬಡ್ತಿ ನೀಡಿದ್ದು, ಅವರನ್ನು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು ಹಾಗೂ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಹೂಗುಚ್ಛ ನೀಡಿ  ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಪಾಲಿಕೆ ಸದಸ್ಯರಾದ ಹೆಚ್.ಸಿ. ಯೋಗೇಶ್, ರೇಖಾ ರಂಗನಾಥ್, ಮೆಹಕ್ ಶರೀಫ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್  ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ. ಗಿರೀಶ್, ಎಂ. ಪ್ರವೀಣ್ ಕುಮಾರ್, ಬಿ ಲೋಕೇಶ್, ಈ.ಟಿ ನಿತಿನ್, ಎಂ. ರಾಕೇಶ್, ಪುಷ್ಪಕ್ ಕುಮಾರ್, ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಚಿನ್ಮಯ್ ಇತರರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ…