ಶಿವಮೊಗ್ಗ: ನಗರದ ಶಿವಪ್ಪನಾಯಕ ಬಡಾವಣೆಯ ಮನೆಯೊಂದ ಶೌಚಾಲಯದಲ್ಲಿ 4 ಅಡಿ ಉದ್ದದ ನಾಗರಹಾವು ಕಾಣಿಸಿಕೊಂಡಿದೆ.ಗಾಬರಿಯಾದ ಮನೆಯವರು ಸ್ನೇಕ್ ಕಿರಣ್ ಗೆ ಕರೆ ಮಾಡಿದ್ದಾರೆ.

ಕೂಡಲೇ ಸ್ಥಳಕ್ಕೆ ತೆರಳಿದ ಸ್ನೇಕ್ ಕಿರಣ್ ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಸ್ನೇಕ್ ಕಿರಣ್ ಅವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವರದಿ ಮಂಜುನಾಥ್ ಶೆಟ್ಟಿ…