ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಹೊಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್.ಪಿ. ಗಿರೀಶ್ , ಹೊಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ ಹನುಮಂತು , ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಾ. ಶ್ರೀನಿವಾಸ್ ಕರಿಯಣ್ಣ , ಪಕ್ಷದ ಮುಖಂಡರಾದ ಆರ್. ಉಮೇಶ್ ರವರುಗಳು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಚಾಲನೆ ನೀಡಿ ಹಾಗೂ ನೂತನ ಬ್ಲಾಕ್ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಿಸಿದರು.

ಈ ಸಭೆಯ ಅಧ್ಯಕ್ಷತೆಯನ್ನು ಶಿವಮೊಗ್ಗ ಗ್ರಾಮಾಂತರ ಹೊಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ #ಈಟಿ ನಿತಿನ್ ವಹಿಸಿದ್ದರು.

ಈ ಸಭೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಸಿಂಧ್ಯಾ , ಗಗನ್ ಗೌಡ ಹೊಳೆಹೊನ್ನೂರು ಬ್ಲಾಕ್ನ ನೂತನ ಪದಾಧಿಕಾರಿಗಳಾದ ಸಚಿನ್ ಸಿಂದೆ, ಶಶಿಕುಮಾರ್ , ಕಿರಣ್, ಅಲೀಶ್ , ಇಮ್ರಾನ್ , ಮನೋಜ್ , ಕೀರ್ತಿ ಸಾಗರ್ , ಸಂಜಯ್, ಕೃಷ್ಣ ಪಿನ್ಗ್ಲೆ, ಮನು ಸಾವಂತ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ…